ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಸ್ಥಳೀಯ ಹೋಂ ಸ್ಟೇಗೆ ಬಂದಿದ್ದ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿ...