ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ, ‘ಶ್ರೀ ಕೃಷ್ಣ ದೇವರಾಯ ಶಿಕ್ಷಣ ಟ್ರಸ್ಟ್’ ವತಿಯಿಂದ ಒತ್ತುವರಿಯಾಗಿರುವ ಬಹುಕೋಟಿ ಮೌಲ್ಯದ 33.33 ಎಕರೆ ಬಿ ‘ಖರಾಬ್’ ಜಮೀನನ್ನು ವಶಕ್ಕೆ ಪಡೆಯಬೇಕು ಎಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಮತ್ತೊಂದು ಮಹತ್ವದ ತೀರ್ಪು ನೀಡಿದೆ.
ಈ ಕುರಿತಾದ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿರುವ ನ್ಯಾಯ...