ಶ್ರೀರಂಗಪಟ್ಟಣ (ಮಂಡ್ಯ): ರೈತರ ನಿರಂತರ ಹೋರಾಟದ ಫಲವಾಗಿ ಕೃಷ್ಣರಾಜಸಾಗರ (ಕೆ.ಆರ್.ಎಸ್) ಅಣೆಕಟ್ಟೆಯಿಂದ ಗುರುವಾರ ಸಂಜೆಯಿಂದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡಲಾಗಿದೆ.
ಅಣೆಕಟ್ಟೆಯ ಮುಖ್ಯ ನಾಲೆಯಾದ ವಿಶ್ವೇಶ್ವರಯ್ಯ ನಾಲೆ ಹಾಗೂ ನದಿ ಒಡ್ಡಿನ ನಾಲೆಗಳಿಗೆ ನೀರು ಹರಿಸಲಾಗಿದೆ. ಮಂಡ್ಯ, ಮಳವಳ್ಳಿ, ಮದ್ದೂರು, ಪಾಂಡವಪುರ, ಶ್ರೀರಂಗಪಟ್ಟಣ ಭಾಗಕ್ಕೆ ನೀರೊದಗಿಸುವ ವಿಶ್ವೇಶ್ವರಯ್ಯ ನಾಲೆಯ ಮೂರು ತೂಬುಗಳ ಪೈಕಿ ಎರಡು ತೂಬುಗಳನ್ನ...